ಡೈಲಿ ವಾರ್ತೆ: 13/NOV/2023

ನೇಜಾರು ನಲ್ಲಿ ನಡೆದ ತಾಯಿ ಮಕ್ಕಳ ಹತ್ಯೆ – ನಮ್ಮ ನಾಡ ಒಕ್ಕೂಟ ಖಂಡನೆ

ಕುಂದಾಪುರ:ಉಡುಪಿ ಜಿಲ್ಲೆಯ ನೇಜಾರು ತೃಪ್ತಿ ನಗರದಲ್ಲಿ ನಡೆದ ತಾಯಿ ಮಕ್ಕಳ ಹತ್ಯೆ ಪ್ರಕರಣದ ಅಮಾನವೀಯ ಘಟನೆಯನ್ನು ‘ನಮ್ಮ ನಾಡ ಒಕ್ಕೂಟ’ವು ತೀವ್ರವಾಗಿ ಖಂಡಿಸಿದೆ.

ಈ ಕೊಲೆ ಪ್ರಕರಣದ ಆರೋಪಿಯನ್ನು ಶೀಘ್ರ ಬಂಧಿಸಿ, ತಕ್ಕ ಶಿಕ್ಷೆ ನೀಡಲು ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿ ಹಾಗೂ ಜಿಲ್ಲಾ ಸಮಿತಿ ಅಗ್ರಹಿಸಿದೆ.
ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ ಹಾಗೂ ಉಡುಪಿ ಜಿಲ್ಲಾ ಅಧ್ಯಕ್ಷರಾದ ಬೆಳ್ವೆ ಮುಸ್ತಾಕ್ ಅಹ್ಮದ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.