ಡೈಲಿ ವಾರ್ತೆ: 13/NOV/2023

ನೇಜಾರು ಬರ್ಬರ ಹತ್ಯೆ ಸಹಿಸುವಂತದಲ್ಲ ಆರೋಪಿಯನ್ನು ಪತ್ತೆ ಹಚ್ಚಿ, ತಕ್ಕ ಶಿಕ್ಷೆ ನೀಡಿ: ಜಿಲ್ಲಾ ಸಂಯುಕ್ತ ಜಮಾಅತ್

❇️❇️❇️❇️❇️❇️❇️❇️❇️❇️❇️
ಉಡುಪಿ: ನೇಜಾರುವಿನಲ್ಲಿ ಅಕ್ರಮವಾಗಿ ಮನೆಗೆ ನುಗ್ಗಿ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆಯು ನಡೆದಿದ್ದು ಇದು ಅತ್ಯಂತ ಆಘಾತಕಾರಿ ಘಟನೆಯಾಗಿದ್ದು ಯಾವುದೇ ಸರ್ವ ಮಾನವನನ್ನೇ ನಾಚಿಸುವ ಹೇಯ ಕೃತ್ಯ ಆಗಿದೆ ಯಾವನೂ ಸಹಿಸುವಂತದಲ್ಲ.
ಈ ಅಮಾನುಷ ಘಟನೆ ನಡೆದಿರುವುದು ಅತ್ಯಂತ ಆಘಾತಕಾರಿ ವಿಚಾರವಾಗಿದೆ.


ಪ್ರಕರಣದ ಆರೋಪಿ ಎಷ್ಟೇ ಪ್ರಭಾವಿಯಾಗಿದ್ದರೂ ಕೂಡ ಆತನನ್ನು ಪೊಲೀಸರು ಆದಷ್ಟೂ ಬೇಗ ಬಂಧಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಇನ್ನು ಮುಂದೆ ಇಂತಹ ಘಟನೆ ಎಲ್ಲೂ ನಡೆಯದಂತೆ ಸಂಭಂದ ಪಟ್ಟ ಅಧಿಕಾರಿಗಳು ಎಚ್ಚರವಹಿಸುವುದರೊಂದಿಗೆ ಆರೋಪಿಯನ್ನು ಅತೀ ಶೀಘ್ರದಲ್ಲಿ ಪತ್ತೆ ಹಚ್ಚಿ ತಕ್ಕ ಶಿಕ್ಷೆ ನೀಡುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಸುನ್ನೀ ಸಂಯುಕ್ತ ಜಮಾಅತ್ ಉಡುಪಿ ಜಿಲ್ಲಾಧ್ಯಕ್ಷ ಹಾಜಿ ಪಿ ಅಬೂಬಕ್ಕರ್ ನೇಜಾರು, ಕಾರ್ಯದರ್ಶಿ ಹಾಜಿ ಎಮ್ ಎ ಬಾವು ಮೂಳೂರು ಹಾಗೂ ಸಂಘಟನಾ ಕಾರ್ಯದರ್ಶಿ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.