ಡೈಲಿ ವಾರ್ತೆ: 30/NOV/2023

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್
ಬಹುಮಾನ ವಿತರಣಾ ಸಮಾರಂಭ

ತೆಕ್ಕಟ್ಟೆ : ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ಮಕ್ಕಳಿಗೆ ಏರ್ಪಡಿಸಿದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಎಮ್. ಚಂದ್ರಶೇಖರ ಶೆಟ್ಟಿಯವರು ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಬಹುಮಾನ ವಿತರಣೆಯನ್ನು ಮಾಡಿದರು. ವಿದ್ಯಾರ್ಥಿಗಳಲ್ಲಿ ಧನಾತ್ಮಕ
ಸ್ಪರ್ಧಾ ಮನೋ ಭಾವನೆ ಇರಬೇಕೆಂದು ಪ್ರತೀಯೊಬ್ಬ ವಿದ್ಯಾರ್ಥಿಯೂ ವಿವಿಧ ಕ್ಷೇತ್ರಗಳಲ್ಲಿ ಪ್ರತಿಭೆ ಹೊಂದಿರುತ್ತಾರೆ, ಅದನ್ನು ಗುರುತಿಸಿ ಸರಿಯಾದ ಮಾರ್ಗದರ್ಶನ ದೊರೆತರೆ ಜೀವನದಲ್ಲಿ ಸಾಧನೆಯನ್ನು ಮಾಡಬಹುದು ಎಂದು ತಿಳಿಸಿದರು.

ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಮಾತನಾಡಿ ಬಹುಮಾನ ಎನ್ನುವುದು ಮುಂದಿನ ಸಾಧನೆಗೆ ದಾರಿಯಾಗಬೇಕು ಹಾಗೂ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ
ಮಾಡುವಂತಾಗಲಿ ಎಂದು ಶುಭ ಹಾರೈಸಿದರು.
ಕಾರ‍್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕರು, ಪೋಷಕರು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಪಿಯಾ ಜೇಮ್ಸ್ ಸ್ವಾಗತಿಸಿದರು. ಸುಷ್ಮಾ ಆರ್ ನಿರೂಪಿಸಿದರು, ಸಂಧ್ಯಾ ಆಚಾರ್ಯ ವಂದಿಸಿದರು.