ಡೈಲಿ ವಾರ್ತೆ: 31/DEC/2023

ಹೊಟ್ಟೆನೋವಿನಿಂದ ನರಳಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ!

ಚಿಕ್ಕಮಗಳೂರು: ಹೆರಿಗೆಯಾಗಿದ್ದ ಬಾಣಂತಿ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ರಂಜಿತಾ ಬಾಯಿ (21) ಮೃತ ದುರ್ದೈವಿ. ಶನಿವಾರ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದ ಈಕೆ ರಾತ್ರಿ ವೇಳೆಗೆ ತೀವ್ರ ಹೊಟ್ಟೆನೋವಿನಿಂದ ನರಳಿ ಸಾವನ್ನಪ್ಪಿದ್ದಾರೆ.
ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಬಾಣಂತಿ ಕುಟುಂಬಸ್ಥರು ಆರೋಪಿಸಿದ್ದಾರೆ.

ರಂಜಿತಾ ಮೂಲತಃ ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ವಡೇರಹಳ್ಳಿ ತಾಂಡ್ಯದ ನಿವಾಸಿ, ಒಂದು ವರ್ಷದ ಹಿಂದೆಯಷ್ಟೇ ಶಶಿಧರ್ ನಾಯಕ್ ಎಂಬವರೊಂದಿಗೆ ವಿವಾಹವಾಗಿದ್ದರು.