ಡೈಲಿ ವಾರ್ತೆ: 27/Jan/2024

ನೇರಳಕಟ್ಟೆ ಶಾಲೆಯಲ್ಲಿ ಗಣರಾಜ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬಂಟ್ವಾಳ : ನೇರಳಕಟ್ಟೆ ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಲ್ಲಿ ಗಣರಾಜ್ಯೋತ್ಸವ ಆಚರಣೆ ಮತ್ತು 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅಬೂಬಕರ್ ಧ್ವಜಾರೋಹಣ ನೆರವೇರಿಸಿದರು.

ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಮಿತಾ ಡಿ ಪೂಜಾರಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸ್ಥಳೀಯ ಗ್ರಾಮ ಪಂಚಾಯಿತ್ ಸದಸ್ಯರುಗಳಾದ ಶ್ರೀಧರ್ ರೈ ಕುರ್ಲೆತ್ತಿಮಾರು, ಲತೀಫ್ ನೇರಳಕಟ್ಟೆ, ಪ್ರೇಮಾ , ಧನಂಜಯ ಗೌಡ, ಶಕೀಲಾ ಕೆ ಪೂಜಾರಿ,
ಸಿ.ಆರ್.ಪಿ ಸತೀಶ್ ರಾವ್, ಎಸ್ಡಿಎಂಸಿ ಉಪಾಧ್ಯಕ್ಷೆ ಭಾರತಿ, ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯಧ್ಯಕ್ಷ ನಿರಂಜನ್ ರೈ ಕುರ್ಲೆತ್ತಿಮಾರು, ಶಾಲಾ ನಾಯಕ ಯಜ್ಞೇಶ್ ಮುಂತಾದವರು ಭಾಗವಹಿಸಿದ್ದರು.

ಶಾಲಾ ಮಕ್ಕಳು, ಪೋಷಕರು, ಶಿಕ್ಷಣ ಅಭಿಮಾನಿಗಳು, ದಾನಿಗಳು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸರ್ವ ಸದಸ್ಯರುಗಳು, ಶಿಕ್ಷಕ ವೃಂದ, ಅತಿಥಿ ಶಿಕ್ಷಕರು, ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದೇ ವೇಳೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯ ಶಿಕ್ಷಕಿ ಕುಸುಮ ಸ್ವಾಗತಿಸಿದರು, ಸಹ ಶಿಕ್ಷಕಿ ಗೀತಾ ಕುಮಾರಿಯವರು ಕಾರ್ಯಕ್ರಮ ನಿರೂಪಿಸಿದರು.