ಡೈಲಿ ವಾರ್ತೆ: 31/Jan/2024

ಗೂಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಟ್ರ್ಯಾಕ್ಟರ್ಗೆ ಸಿಲುಕಿ ಬಾಲಕ ಸಾವು

ಬಾಲಗಕೋಟೆ: ಗೂಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಟ್ರ್ಯಾಕ್ಟರ್ಗೆ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಎಪಿಎಂಸಿ ಬಳಿ ನಡೆದಿದೆ.

ಟ್ಯಾಕ್ಟರ್ ಗೆ ಸಿಲುಕಿ ಮೃತಪಟ್ಟ ಬಾಲಕ ನಿಖಿಲ್ ಕೋಳಿ(13) ಎಂದು ಗುರುತಿಸಲಾಗಿದೆ.

ಗೂಳಿ ರಸ್ತೆಯಲ್ಲಿ ಕಾದಾಡುತ್ತ ವಿದ್ಯಾರ್ಥಿ ನಿಖಿಲ್ ಮೇಲೆ ನುಗ್ಗಿಬಂದಿದೆ. ಈ ವೇಳೆ ಗೂಳಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗೆ ಸಿಲುಕಿ ಬಾಲಕ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಜಮಖಂಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.