ಸಾಂದರ್ಭಿಕ ಚಿತ್ರ

ಡೈಲಿ ವಾರ್ತೆ: 14/Feb/2024

ಆಟೋರಿಕ್ಷಾ ತಡೆದು ಪ್ರಯಾಣಿಕನಿಗೆ ಹಲ್ಲೆ, ಜೀವ ಬೆದರಿಕೆ – ದೂರು ದಾಖಲು

ಸುಳ್ಯ: ವ್ಯಕ್ತಿಯೋರ್ವರು ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಡೆದು ನಿಲ್ಲಿಸಿ ಆಟೋರಿಕ್ಷಾದಿಂದ ಹೊರಗೆಳೆದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆ ಸುಳ್ಯ ಮುಖ್ಯ ರಸ್ತೆಯಲ್ಲಿ ಕಾಟಿಪಳ್ಳ ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ಪ್ರಯಾಣಿಕ ಸುಳ್ಯ ನಿವಾಸಿ ಅಜಿತ್ (21) ಎಂದು ತಿಳಿದು ಬಂದಿದೆ.
ಇವರು ಜಯರಾಮ ಎಂಬುವರ ಬಾಬು ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಾ ಅಜ್ಜಾವರ-ಸುಳ್ಯ ಮುಖ್ಯ ರಸ್ತೆಯಲ್ಲಿ ಕಾಟಿಪಳ್ಳ ಎಂಬಲ್ಲಿ ತಲುಪಿದಾಗ ಆರೋಪಿಗಳಾದ ಅಜ್ಜಾವರ ಗ್ರಾಮ ಸುಳ್ಯ ನಿವಾಸಿ ದಿನೇಶ್ (45), ಪುರುಷೋತ್ತಮ (32)ಹಾಗೂ ಸನತ್(25) ಎಂಬವರುಗಳು, ಅಜಿತ್ ಪ್ರಯಾಣಿಸುತ್ತಿದ್ದ ಆಟೋರಿಕ್ಷಾವನ್ನು ತಡೆದು నిలిసి, ಅವರನ್ನು ಆಟೋರಿಕ್ಷಾದಿಂದ ಹೊರಗೆಳೆದು ಹಲ್ಲೆ ನಡೆಸಿರುತ್ತಾರೆ. ಈ ವೇಳೆ ಆಟೋ ಚಾಲಕ ಜಯರಾಮ್ ಹೊಡೆಯುತ್ತಿರುವುದನ್ನು ತಡೆಯಲು ಪ್ರಯತ್ನಿಸಿದಾಗ, ಅವರನ್ನೂ ಬೆದರಿಸಿರುತ್ತಾರೆ. ಬಳಿಕ ಆರೋಪಿಗಳು ಜೀವಬೆದರಿಕೆ ಒಡ್ಡಿ ತೆರಳಿರುತ್ತಾರೆ.

ಹಲ್ಲೆಯಿಂದ ಗಾಯಗೊಂಡಿರುವ ಅಜಿತ್ ಅವರು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.