ಡೈಲಿ ವಾರ್ತೆ: 26/Feb/2024

ಆನಂದಪುರ:ಬೈಕ್ ಗೆ ಕಾರು ಡಿಕ್ಕಿ – ಸವಾರ ಮೃತ್ಯು,ಇನ್ನೋರ್ವ ಗಂಭೀರ

ಶಿವಮೊಗ್ಗ:ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ಸಾಗರದ ಆನಂದಪುರದ ಗೌತಮಪುರ ಬಳಿ ಸೋಮವಾರ ಸಂಜೆ ನಡೆದಿದೆ.

ಮೃತಪಟ್ಟ ವ್ಯಕ್ತಿ ಭೀಮೇಶ್ (42) ಎಂದು ಗುರುತಿಸಲಾಗಿದೆ.

ಶಿಕಾರಿಪುರದ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು,ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದು, ಮತ್ತೊಬ್ಬ ಬೈಕ್ ಸವಾರ ಪ್ರತಾಪ್ (26) ನ ಎರಡು ಕಾಲುಗಳು ತುಂಡಾಗಿವೆ ಎಂದು ವರದಿಯಾಗಿದೆ.
ತೀವ್ರ ಗಾಯಗೊಂಡ ಪ್ರತಾಪ್ ಸ್ಥಿತಿ ಗಂಭೀರವಾಗಿದೆ.
ಕಾರು ಆನಂದಪುರದಿಂದ ಶಿಕಾರಿಪುರ ಕಡೆಗೆ ಸಾಗುತ್ತಿದ್ದು, ಬೈಕ್ ನಲ್ಲಿ ಸ್ನೇಹಿತರು ಶಿಕಾರಿಪುರದಿಂದ ಆನಂದಪುರದೆಡೆಗೆ ಬರುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರರು ಆನಂದಪುರದ ಸಂತೆ ಮೈದಾನ ಬಳಿಯ ನಿವಾಸಿಗಳು ಎಂದು ತಿಳಿದು ಬಂದಿದೆ. ಆನಂದಪುರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.