ಡೈಲಿ ವಾರ್ತೆ: 01/Mar/2024

ಕಲಬುರಗಿ: ಸಂಸದ ಉಮೇಶ್ ಜಾಧವ್ ಬೆಂಬಲಿಗ ಗಿರೀಶ್ ಚಕ್ರನ ಬರ್ಬರ ಹತ್ಯೆ!

ಕಲಬುರಗಿ : ಸಂಸದ ಡಾ. ಉಮೇಶ್ ಜಾಧವ್ ಬೆಂಬಲಿಗನೂ ಆಗಿರುವ ಬಿಜೆಪಿ ಮುಖಂಡರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಬಿಜೆಪಿ ಮುಖಂಡ ಗಿರೀಶ್ ಚಕ್ರ ಎಂದು ತಿಳಿದು ಬಂದಿದೆ.
ನಾಲ್ಕು ದಿನಗಳ ಹಿಂದೆಯಷ್ಟೇ BSNL ಸಲಹಾ ಸಮಿತಿ ನಿರ್ದೇಶಕರನ್ನಾಗಿ ಗಿರೀಶ್ ಅವರನ್ನು ಸಂಸದ ಉಮೇಶ್ ಜಾಧವ್ ನೇಮಕ ಮಾಡಿದ್ದರು.

ಈ ಹಿನ್ನೆಲೆ ಪಾರ್ಟಿ ಕೊಡುವುದಾಗಿ ನಂಬಿಸಿ ಗಿರೀಶ್ ಚಕ್ರ ಅವರನ್ನು ಸ್ನೇಹಿತರೇ ಜಮೀನಿಗೆ ಕರೆಸಿದ್ದರು. ಅದರಂತೆ ಜಮೀನಿಗೆ ಬಂದ ಗಿರೀಶ್ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಗಾಣಗಾಪುರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.