ಡೈಲಿ ವಾರ್ತೆ: 14/Mar/2024

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರನ್ನು ಭೇಟಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರನ್ನು ಗಂಜಿಮಠದ ಒಡ್ಡೂರು ಫಾರ್ಮ್ಸ್ ನಲ್ಲಿ ಭೇಟಿಯಾದರು.

ರಾಜೇಶ್ ನಾಯ್ಕ್ ಅವರಿಂದ ಮಾರ್ಗದರ್ಶನ ಪಡೆದು, ಶ್ರೀ ಕೊಡಮಣಿತ್ತಾಯ ದೈವದ ಆಶೀರ್ವಾದ ಪಡೆದರು.