ಡೈಲಿ ವಾರ್ತೆ: 16/Mar/2024

ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳಿಗೆ ಜಾಮೀನು

ಮಂಗಳೂರು: 2022 ಜುಲೈ 28ರಂದು ಸುರತ್ಕಲ್‌ನಲ್ಲಿ ಮೊಹಮ್ಮದ್ ಫಾಝಿಲ್ ಹತ್ಯೆ ನಡೆಸಿದ ಪ್ರಮುಖ 3 ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ.

ಸುರತ್ಕಲ್ ಮಂಗಳಪೇಟೆಯ ಮೊಹಮ್ಮದ್ ಫಾಝಿಲ್ ಹತ್ಯೆಯ ಪ್ರಮುಖ ಆರೋಪಿಗಳಾದ ಸುಹಾಸ್ ಶೆಟ್ಟಿ, ಅಭಿಷೇಕ್, ನೇಪಾಳಿ ಗಣೇಶ್ ಎಂಬ ಮೂವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.

2022 ಜುಲೈ 28ರಂದು ರಾತ್ರಿ ಸುರತ್ಕಲ್‌ನ ಮಂಗಲಪೇಟೆ ನಿವಾಸಿ ಮೊಹಮ್ಮದ್ ಫಾಝಿಲ್ ಎಂಬ ಅಮಾಯಕ ಯುವಕ ಸುರತ್ಕಲ್ ಪಟ್ಟಣದ ಅಂಗಡಿಯೊಂದರ ಹೊರಗೆ ನಿಂತಿದ್ದಾಗ ಮಾರಣಾಂತಿಕ ದಾಳಿ ನಡೆಸಲಾಗಿತ್ತು. ನಂತರ ಫಾಝಿಲ್ ಆಸ್ಪತ್ರೆಯಲ್ಲಿ ನಿಧನರಾದರು.