ಡೈಲಿ ವಾರ್ತೆ: 17/Mar/2024

ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಂದ ಪ್ರಮಾಣ ವಚನ ಸ್ವೀಕರ

ಉಡುಪಿ: ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರು ಶುಕ್ರವಾರ ಪ್ರಮಾಣ ಸ್ವೀಕರಿಸಿದರು.

ನೂತನ ಉಪಾಧ್ಯಕ್ಷರಾದ ಹಂಝತ್ ಅಬ್ದುಲ್ ರೆಹಮಾನ್ ವಕೀಲರು ಹಾಗೂ ಸದಸ್ಯರಾದ ಮನ್ಸೂರ್ ಇಬ್ರಾಹಿಂ ಮರವಂತೆ, ಹಮೀದ್ ಯೂಸುಫ್ ಮುಳೂರು, ಮೊಹಮ್ಮದ್ ಹನೀಫ್ ಕಾರ್ಕಳ ಸಿರ್ಲಾಲ್ ಇವರಿಗೆ ಜಿಲ್ಲಾ ವಕ್ಫ್ ಅಧ್ಯಕ್ಷರಾದ ಅಬ್ದುಲ್ ಮುತ್ತಾಲಿ ವಂಡ್ಸೆ ಹಾಗೂ ಜಿಲ್ಲಾ ವಕ್ಫ್ ಅಧಿಕಾರಿ ಹಂಝದ್ ಮುಹೀನ್ ಅವರು ಪ್ರಮಾಣ ವಚನ ಬೋಧನೆ ಮಾಡಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಅಬ್ದುಲ್ ಮುತ್ತಾಲಿ ಅವರು ನೂತನ ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಶುಭ ಕೋರಿದರು.