ಡೈಲಿ ವಾರ್ತೆ: 23/Mar/2024

ಲಾರಿ-ಬೈಕ್ ನಡುವೆ ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

ಕಡೂರು: ಬೈಕ್ ಗೆ ಲಾರಿ ಡಿಕ್ಕಿ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ತಂಗಲಿ ಬಳಿ ಶನಿವಾರ ಸಂಭವಿಸಿದೆ.

ಮೃತಪಟ್ಟ ಮಹಿಳೆ ಸುಮಾ (25) ಎಂದು ತಿಳಿದು ಬಂದಿದೆ.

ಕಡೂರು ತಾಲೂಕಿನ ತಂಗಲಿ ಮೂಲದ ಜಯಣ್ಣ, ಪತ್ನಿ ಜೊತೆ ಬೈಕಿನಲ್ಲಿ ಹೋಗುವಾಗ ಲಾರಿ ಚಾಲಕ ಒನ್ ವೇನಲ್ಲಿ ಬಂದ ಪರಿಣಾಮ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.
ಬೈಕ್ ಸವಾರ ಮಹಿಳೆಯ ಪತಿ ದಾವಣಗೆರೆ ಎಎಸ್ಪಿ ಗನ್‍ಮ್ಯಾನ್ ಜಯಣ್ಣ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಡ್ಯೂಟಿಗೆ ಹೋಗಲು ಪತ್ನಿ ಜೊತೆ ದಾವಣಗೆರೆಗೆ ತೆರಳಲು ರೈಲ್ವೇ ನಿಲ್ದಾಣಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ. ಒನ್ ವೇನಲ್ಲಿ ಬಂದ ಲಾರಿ ಚಾಲಕನಿಂದ ಈ ಅಪಘಾತ ನಡೆದಿದೆ ಎನ್ನಲಾಗಿದೆ.