ಡೈಲಿ ವಾರ್ತೆ: 30/Mar/2024

ಬಂಟ್ವಾಳ: ಕೂಲಿ ಕಾರ್ಮಿಕನ ಮನೆಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ ಮೌಲ್ಯದ ಮನೆ ಸಂಪೂರ್ಣ ಭಸ್ಮ

ಬಂಟ್ವಾಳ : ಆಕಸ್ಮಿಕವಾಗಿ ಬೆಂಕಿ ತಗುಲಿ ಕೂಲಿ ಕಾರ್ಮಿಕೆಯೋರ್ವರ ಮನೆ ಸಂಪೂರ್ಣವಾಗಿ ಭಸ್ಮವಾದ ಘಟನೆ ಕುಕ್ಕಿಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲಿಯನಡುಗೋಡು ಎಂಬಲ್ಲಿ ನಡೆದಿದೆ.

   ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ ಮೋನಮ್ಮ ಎಂಬವರ ಮನೆಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂ ಮೌಲ್ಯದ ಮನೆ ಸಂಪೂರ್ಣ ಭಸ್ಮವಾಗಿದೆ.

   ಮೋನಮ್ಮ‌ಅವರು ಇಬ್ಬರು ಮಕ್ಕಳ ಜೊತೆ ಪೂಂಜಾ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಗೆ ತೆರಳಿದ್ದರು.
ಇವರು ಜಾತ್ರೆಯಿಂದ ವಾಪಸು ಮನೆಗೆ ಬಂದಾಗ ಮನೆ
ಸಂಪೂರ್ಣ ಬೆಂಕಿಗೆ ಆವುತಿಯಾಗಿತ್ತು. ರಾತ್ರಿ ವೇಳೆ ಹೊಗೆಯನ್ನು ಕಂಡ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನ ಮಾಡಿದ್ದಾರೆ.ಅದಾಗಲೇ ಬೆಂಕಿ ಮನೆಯನ್ನು ಆವರಿಸಿಕೊಂಡಿತ್ತು.

   ಮನೆಯೊಳಗಿನ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿದೆ. ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿದು ಬಂದಿದೆ.

   ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರು, ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಸದಸ್ಯೆ ಶೋಭಾ, ಪಿಡಿಒ ಪದ್ಮನಾಭ ನಾಯ್ಕ್ ಅವರು ಬೇಟಿ ನೀಡಿದ್ದಾರೆ