ಡೈಲಿ ವಾರ್ತೆ: 07/April/2024

ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ!

ಹೊಳಲ್ಕೆರೆ: ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟು 38 ಮಂದಿ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಭಾನುವಾರ ಮುಂಜಾನೆ ಸಂಭವಿಸಿದೆ.

ಬೆಂಗಳೂರಿನಿಂದ ಹೊರಟ ಬಸ್ಸಿನಲ್ಲಿ 50 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ರಸ್ತೆ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

ಭಾನುವಾರ ಮುಂಜಾನೆ ನಾಲ್ಕು ಗಂಟೆಗೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ ಮೂವತ್ತೆಂಟು ಮಂದಿ ಗಾಯಗೊಂಡಿದ್ದಾರೆ ಗಾಯಾಳುಗಳಿಗೆ ಹೊಳಲ್ಕೆರೆ ತಾಲ್ಲೂಕಿನ ಸರಕಾರಿ ಅಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊಳಲ್ಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.