ಡೈಲಿ ವಾರ್ತೆ: 16/April/2024

ಉಡುಪಿ-ಚಿಕ್ಕಮಂಗಳೂರು ಕ್ಷೇತ್ರದ ಉಡುಪಿಯಲ್ಲಿ ಕಾಂಗ್ರೆಸ್ ಸಾರ್ವಜನಿಕ ಸಭೆ:
ಅಪಪ್ರಚಾರಕ್ಕೆ ಕಿವಿ ಕೊಡದೆ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವಿಗೆ ಶ್ರಮಿಸಿ- ಜನಾರ್ಧನ ತೋನ್ಸೆ

ಉಡುಪಿ: ಅಪಪ್ರಚಾರಕ್ಕೆ ಕಿವಿ ಕೊಡದೆ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವಿಗೆ ಶ್ರಮಿಸಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರಾದ ಜನಾರ್ಧನ ತೋನ್ಸೆ ಹೇಳಿದರು.
ಅವರು ಅಂಬಲಪಾಡಿ ಉಮಾ ಮಹೇಶ್ವರ ಭಜನಾ ಮಂದಿರದ ಬಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಯವರ ಪರ ಮಂಗಳವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ ಜನರು ಯಾವುದೇ ಅಪಪ್ರಚಾರಕ್ಕೆ ಕಿವಿ ಕೊಡದೆ ಸಜ್ಜನ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಯವರಯನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಆ ಮೂಲಕ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ರಾಜ್ಯದ ಜನತೆಗೆ ನೀಡಿದ ಗ್ಯಾರಂಟೀ ಯೋಜನೆಗೆ ಕೃತಜ್ಞತೆ ಸಲ್ಲಿಸಬೇಕು ಎಂದು ಕರೆ ನೀಡಿದರು.

ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಸಾದ್ ಕಾಂಚನ್, ಎಂ. ಎ.ಗಫೂ‌ರ್, ದಿವಾಕರ್ ಕುಂದರ್, ಸುಂದರ ಮಾಸ್ಟರ್, ಜಯಕರ್ ಸೇರಿಗಾರ್, ನವೀನ್ ಶೆಟ್ಟಿ, ಹರೀಶ್ ಕಿಣಿ, ಸದಾಶಿವ ಅಮೀನ್ ಕಟ್ಟೆಗುಡ್ಡೆ, ಸುರೇಶ್ ಪೂಜಾರಿ, ಪ್ರಶಾಂತ್ ಪೂಜಾರಿ, ಮಿಥುನ್ ಅಮೀನ್ ಸರಸ್ವತಿ ಉಪಸ್ಥಿತರಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಸ್ವಾಗತಿಸಿ, ಸತೀಶ್ ಕೊಡವೂರು ಕಾರ್ಯಕ್ರಮ ನಿರ್ವಹಿಸಿ, ಲಕ್ಷ್ಮಣ್ ಪೂಜಾರಿ ಅಂಬಲಪಾಡಿ ಧನ್ಯವಾದ ನೀಡಿದರು.