ಡೈಲಿ ವಾರ್ತೆ: 20/April/2024

ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಮೃತ್ಯು!

ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣೆಯ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿಯೊಬ್ಬರು ತೀವ್ರ ಹೃದಯಾಘಾತದಿಂದ ಶನಿವಾರ ನಿಧನ ಹೊಂದಿದ್ದಾರೆ.

ಮೂಲತ: ದಾವಣಗೆರೆ ಮೂಲದ ಹುಬ್ಬಳ್ಳಿಯ ಹೆಸ್ಕಾಂ (ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿ) ಕೇಂದ್ರ ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕೃಷ್ಣಮೂರ್ತಿ ಬಿ.ಆರ್. ಮೃತಪಟ್ಟವರು.
74-ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸೆಕ್ಟರ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಕರ್ತವ್ಯದಲ್ಲಿದ್ದಾಗ ತೀವ್ರ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ.
ಮೃತರು ಸರಕಾರಿ ಕಿತ್ತೂರು ಸರಕಾರಿ ಆಸ್ಪತ್ರೆಯ ದಂತವೈದ್ಯೆ ಡಾ.ನಾಗರತ್ನಾ ಮತ್ತು ಪುತ್ರ ಸ್ವರೂಪ ಅವರನ್ನು ಅಗಲಿದ್ದಾರೆ.