ಡೈಲಿ ವಾರ್ತೆ: 25/April/2024

ಸರಕಾರ ಗ್ಯಾರಂಟಿ ಯೋಜನೆ ಬಗ್ಗೆ ಅವಹೇಳನಕಾರಿ ಹೇಳಿಕೆ: ನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್!

ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಯಿಂದ ಹಾಗೂ ಫ್ರೀ ಬಸ್ ಯೋಜನೆಯಿಂದ ತೀರ್ಥಯಾತ್ರೆಗೆಂದು ಹೋಗುತ್ತೇವೆ ಎಂದು ಹೇಳಿ ಹೆಣ್ಣು ಮಕ್ಕಳು ಎಲ್ಲೆಲ್ಲೂ ಹೋಗುತ್ತಿರುತ್ತಾರೆ ಅಂತಾ ನಟಿ ಶ್ರುತಿ  ಮಾತನಾಡಿರೋದು ಮಾಧ್ಯಮದಲ್ಲಿ ವರದಿಯಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ರಾಜ್ಯ ಮಹಿಳಾ ಆಯೋಗ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಶ್ರುತಿಗೆ ಕೊಟ್ಟನೋಟಿಸ್ ನಲ್ಲಿ ಈ ರೀತಿ ಬಹಿರಂಗವಾಗಿ ಹೆಣ್ಣು ಮಕ್ಕಳನ್ನು ಅವಮಾನಿಸಿರೋದು ಖಂಡನೀಯ. ರಾಜ್ಯ ಮಹಿಳಾ ಆಯೋಗದ ಅಧಿನಿಯಮ 1995 ಪರಿಚಯ 10(ಎ)ಮೇರೆಗೆ ನೋಟಿಸ್ ಜಾರಿ ಮಾಡಿದೆ. ಏಳು‌ ದಿನದಲ್ಲಿ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಲಾಗಿದೆ.