ಡೈಲಿ ವಾರ್ತೆ: 27/April/2024

ಬೈಕ್, ಲಾರಿ ನಡುವೆ ಅಪಘಾತ: ಗಾಯಳು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯ!

ಕಾಸರಗೋಡು : ಲಾರಿ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು‌ ಕುಂಬಳೆ ಸಮೀಪದ ಬಂಬ್ರಾಣ ಅಂಡಿತ್ತಡ್ಕ ದ ಯೂಸಫ್ ಕೈಫ್ ( 19) ಎಂದು ಗುರುತಿಸಲಾಗಿದೆ. ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದ ಕೈಫ್ ನಾಲ್ಕು ದಿನಗಳ ಹಿಂದೆ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಉಪ್ಪಳ ಸಮೀಪದ ಕುಕ್ಕಾರ್ ಎಂಬಲ್ಲಿ ಅಪಘಾತ ನಡೆದಿತ್ತು. ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಈತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.