ಡೈಲಿ ವಾರ್ತೆ: 28/April/2024

ಬಿಸಿಲಿನ ತಾಪಕ್ಕೆ ನಿರ್ಜಲೀಕರಣ: ರಾಯಚೂರಿನಲ್ಲಿ ಅವಳಿ ಮಕ್ಕಳ ಸಾವು

ರಾಯಚೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬಿಸಲಿನ ತಾಪಕ್ಕೆ ನಿರ್ಜಲೀಕರಣ ಉಂಟಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ರಾಯಚೂರು  ತಾಲೂಕಿನ ಚಿಕ್ಕಸುಗೂರು ಗ್ರಾಮದ ಹುಸೇನಮ್ಮ ಹಾಗೂ ಮಾರುತಿ ದಂಪತಿ ಮಕ್ಕಳಾದ ಆರತಿ (9) ಹಾಗೂ ಪ್ರಿಯಾಂಕಾ (7) ಮೃತ ದುರ್ದೈವಿಗಳು.
ಪುತ್ರ ಲಕ್ಕಪ್ಪ (5)ಗೆ ರಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ. ಹಾಗೂ ಮಾರುತಿ ತಂದೆ ಲಕ್ಷ್ಮಣ ಅವರನ್ನೂ ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ (ಏ.27)ರ ಸಂಜೆ ಏಕಾಏಕಿ ಸಮಸ್ಯೆ ಉಲ್ಬಣಗೊಂಡಿತ್ತು. ಕುಟುಂಬ ಕೃಷ್ಣಾ ನದಿ ನೀರನ್ನ ಕುಡಿಯುತ್ತಿತ್ತು ಎಂಬ ಮಾಹಿತಿ ದೊರೆತಿದೆ.