ಡೈಲಿ ವಾರ್ತೆ: 30/April/2024

ಬಾಳೆಗಿಡ ಯುವಕನ ಪ್ರಾಣ ಉಳಿಸಿತ್ತು , ಏನಿದು ಸ್ಟೋರಿ ಇಲ್ಲಿದೆ ವಿವರ

ಬೆಂಗಳೂರು: ಇತ್ತೀಚೆಗೆ ಮಾನಸಿಕ ಖನ್ನತೆಗೊಳಗಾಗಿದ್ದ ಪದವಿ ವ್ಯಾಸಂಗ ಮಾಡಿರುವ ಸಂಜಿತ್‌ ಈತ ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ಸೋಮವಾರ ರಾತ್ರಿ 7.30ರ ಸುಮಾರಿಗೆ ಬೆಂಗಳೂರಿನ ಮನವರ್ತ್ ಕಾವಲಿನಲ್ಲಿರುವ ಅಪಾರ್ಟ್ ಮೆಂಟ್‌ನ 14ನೇ ಮಹಡಿಯಿಂದ ಕೆಳಗೆ ಜಿಗಿದ ಸಂಜಿತ್‌, ಬಾಳೆಗಿಡಗಳ ಮೇಲೆ ಬಿದ್ದು ಬಳಿಕ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ.

ಮತ್ತೂಂದೆಡೆ ಶಬ್ದ ಕೇಳಿ ಅಪಾರ್ಟ್‌ಮೆಂಟ್‌ ನಿವಾಸಿಗಳು ಹೊರಗೆ ಬಂದು ನೋಡಿದಾಗ, ಸಂಜಿತ್‌ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಆತನ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಸ್ಥಳೀಯರ ಸಹಾಯ ಪಡೆದು, ಆತನ ಪೋಷಕರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಆತನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾಗಿ ಪೊಲೀಸರು ಹೇಳಿದರು. ಇತ್ತೀಚೆಗೆ ಸಂಜಿತ್‌ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದ ಎಂದು ತಿಳಿದು ಬಂದಿದ್ದು, ಆತ್ಮಹತ್ಯೆ ಯತ್ನಿಸಲು ನಿಖರ ಕಾರಣ ಇಳಿದು ಬಂದಿಲ್ಲ. ಪೋಷಕರು ಮಗನಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ  ಈ ಸಂಬಂಧ ತಲಘಟ್ಟಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.