ಡೈಲಿ ವಾರ್ತೆ: 01/ಮೇ /2024

ಬಿಸಿಲಿನ ಪ್ರಕೋಪಕ್ಕೆ ಕುಸಿದು ಬಿದ್ದ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್!

ಕಲಬುರಗಿ: ಕರ್ನಾಟಕದಲ್ಲಿ ಬಿಸಿಲಿನ ಆರ್ಭಟ ಮುಂದುವರೆದಿದೆ. ಅದರಲ್ಲೂ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತ್ಯಧಿಕ ಗರಿಷ್ಠ ತಾಪಮಾನ ದಾಖಲಾಗಿದೆ. ಇದೀಗ ಈ ಬಿಸಿಲಿನ ಪ್ರಕೋಪ ತಾಳಲಾರದೇ ಸಂಸದರೊಬ್ಬರು ಕುಸಿದು ಬಿದ್ದಿದ್ದಾರೆ.

ಕಲಬುರಗಿಯಲ್ಲಿನ ತೀವ್ರ ಬಿಸಿಲಿನ ತಾಪಕ್ಕೆ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್ ಅವರು ತಲೆ ಸುತ್ತಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ತುರ್ತು ವಾಹನಕ್ಕೆ ಕರೆ ಮಾಡಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.