ಡೈಲಿ ವಾರ್ತೆ: 02/ಮೇ /2024

ಕೆ.ಎಸ್.ಈಶ್ವರಪ್ಪ ಚುನಾವಣ ಕಚೇರಿ ಮುಂದೆ ವಾಮಾಚಾರ


ಶಿಕಾರಿಪುರ : ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ ಅವರ ಶಿಕಾರಿಪುರದ ಚುನಾವಣ ಕಚೇರಿ ಮುಂದೆ ವಾಮಾಚಾರ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ರಾಷ್ಟ್ರಭಕ್ತರ ಬಳಗದ ಶಿಕಾರಿಪುರ ಕಚೇರಿಯ ಬಾಗಿಲಿನ ಮುಂದೆ ನಿಂಬೆಹಣ್ಣು, ಅರಿಶಿಣ, ಕುಂಕುಮ ಸೇರಿ ಹಲವು ವಸ್ತು ಪತ್ತೆಯಾಗಿದೆ. ಕಳೆದ ರಾತ್ರಿ ವಾಮಾಚಾರ ಮಾಡಿಸಲಾಗಿದೆ ಎಂದು ಈಶ್ವರಪ್ಪ ಅವರು ವಾಟ್ಸಪ್‌ ಮೂಲಕ ಮಾಧ್ಯಮಗಳ ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.‌