ಡೈಲಿ ವಾರ್ತೆ: 06/ಮೇ /2024

ಮಾಣಿ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತರಬೇತಿ ಕಾರ್ಯಾಗಾರ

ಬಂಟ್ವಾಳ : 2024-25 ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ  “ವೃತ್ತಿ ಮಾರ್ಗದರ್ಶನ” ಎಂಬ ವಿಚಾರದಲ್ಲಿ ತರಬೇತಿ ಕಾರ್ಯಾಗಾರ ಸೋಮವಾರ ಶಾಲಾ ಸಭಾಂಗಣದಲ್ಲಿ ನಡೆಯಿತು.

ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿದ ಶಾಲಾ ಸಂಚಾಲಕ ಜೆ. ಪ್ರಹ್ಲಾದ್ ಶೆಟ್ಟಿ ಮಾತನಾಡಿ ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ದಾರಿ ದೀಪವಾಗಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
    
   ಭಾರತೀಯ ವಾಯುಸೇನೆಯ ನಿವೃತ್ತ ಯೋಧ ಹಾಗೂ ಅಂತರಾಷ್ಟ್ರೀಯ ತರಬೇತುದಾರ
ಶ್ರೀಪ್ರಕಾಶ್ ಕುಕ್ಕಿಲ ಕಾರ್ಯಾಗಾರ ನಡೆಸಿಕೊಟ್ಟರು.

ಶಾಲಾ ಆಡಳಿತಾಧಿಕಾರಿ ರವೀಂದ್ರ ದರ್ಬೆ ಸ್ವಾಗತಿಸಿ, ಸಹ ಶಿಕ್ಷಕಿ ಸುಧಾ ಎಸ್.ರಾವ್ ವಂದಿಸಿದರು. ಸುಪ್ರಿಯಾ ಡಿ. ಕಾರ್ಯಕ್ರಮ ನಿರೂಪಿಸಿದರು