ಡೈಲಿ ವಾರ್ತೆ: 07/ಮೇ /2024

ಬಂಟ್ವಾಳ: ಬಂಟರ ಭವನದ ಕಂಪೌಂಡು ಒಳಗಡೆ ರಕ್ತಸಿಕ್ತವಾಗಿ ಬಿದ್ದ ವ್ಯಕ್ತಿಯ ಮೃತದೇಹ ಪತ್ತೆ!

ಬಂಟ್ವಾಳ : ಬಿ.ಸಿ ರೋಡ್ – ತಲಪಾಡಿ ಸಮೀಪದ ಬಂಟರ ಭವನದ ಮದುವೆ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

   ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಭವನದ ಕಂಪೌಂಡ್  ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿದ್ದು, ಹೊರಗಡೆಯಲ್ಲಿ ಆತನ ಬೈಕ್ ಪತ್ತೆಯಾಗಿದೆ.

ಸಾವಿಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಪೋಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತುಕೊಂಡಿದ್ದು, ಆ ವೇಳೆ ನಿಯಂತ್ರಣ ಕಳೆದು ಕೆಳಗೆ ಬಿದ್ದಿರಬೇಕು ಎಂದು ಶಂಕಿಸಲಾಗಿದೆ.

    ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ  ಶಿವಕುಮಾರ್, ಠಾಣಾಧಿಕಾರಿ ಹರೀಶ್ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.