ಡೈಲಿ ವಾರ್ತೆ: 08/ಮೇ /2024

ಶಿವಮೊಗ್ಗ: ಇಬ್ಬರ ಯುವಕರ ಬರ್ಬರ ಹತ್ಯೆ- ಕೊಲೆ ಮಾಡಲು ಬಂದವರೇ ಕೊಲೆಯಾದರೆ.?

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಬುಧವಾರ ಡಬಲ್ ಮರ್ಡರ್ ನಡೆದಿದೆ.

ಕೊಲೆಯಾದ ವ್ಯಕ್ತಿಗಳು ಶೋಹಿಬ್ ಹಾಗೂ ಗೌಸ್ ಎಂದು ಗುರುತಿಸಲಾಗಿದೆ.
ಹತ್ಯೆ ಮಾಡಲು ಬಂದವರೇ ಕೊಲೆಗೀಡಾದ ಶಂಕೆ ವ್ಯಕ್ತವಾಗಿದೆ.
ಕೊಲೆಯಾದವರನ್ನು ನಗರದ ಕವಿರತ್ನ ಕಾಳಿದಾಸ ರಸ್ತೆಯ ನಿವಾಸಿಗಳೆಂದು ಗುರುತಿಸಲಾಗಿದೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಕಾಳಗದಲ್ಲಿ ಗೌಸ್ ಹಾಗೂ ಶೋಹಿಬ್ ಎಂಬುವರ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.

ಯಾಸೀನ್ ಖುರೇಷಿ ಗುಂಪು ಹಾಗೂ ಶೋಹಿಬ್ ಗುಂಪುಗಳ ನಡುವೆ ಜಗಳವಾಗಿದೆ. ಈ ಎರಡು ಗುಂಪುಗಳ ನಡುವೆ ಮೊದಲು ಅಣ್ಣ ನಗರದಲ್ಲಿ ಜಗಳ ಪ್ರಾರಂಭವಾಗಿದ್ದು, ಒಂದು ಗುಂಪನ್ನು ಇನ್ನೊಂದು ಗುಂಪು ಬೈಕ್ನಲ್ಲಿ‌ ಹಿಂಬಾಲಿಸಿಕೊಂಡು ಬಂದು ಲಷ್ಕರ್ ಮೊಹಲ್ಲಾದಲ್ಲಿ ದಾಳಿ ಮಾಡಿದೆ. ಈ ವೇಳೆ ಯಾಸೀನ್ ಖುರೇಷಿ ಹಾಗೂ ಆತನ ಗುಂಪು ಶೋಹಿಬ್ ಹಾಗೂ ಗೌಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಐದಾರು ಬೈಕ್ಗಳು ಸಿಕ್ಕಿವೆ. ಆರೋಪಿಗಳ ಹುಡುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.