ಡೈಲಿ ವಾರ್ತೆ: 09/ಮೇ /2024

SSLC ಪರೀಕ್ಷಾ ಫಲಿತಾಂಶ: ಬಾಗಲಕೋಟೆ ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ, ದಕ್ಷಿಣಕನ್ನಡ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. ದ್ವಿತೀಯ

ಗುರುವಾರ ಪ್ರಕಟಗೊಂಡಿರುವ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಗಲಕೋಟೆ ಜಿಲ್ಲೆ ಮೆಳ್ಳಿಗೇರಿಯ ಅಂಕಿತಾ ಕೊಣ್ಣೂರ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ ಅವರು 625ಕ್ಕೆ 625 ಅಂಕ ಪಡೆದಿದ್ದಾರೆ.
ರೈತ ಕುಟುಂಬದಲ್ಲಿ ಜನಿಸಿರುವ ಅಂಕಿತಾ ಸಾಧನೆಗೆ ಮುಧೋಳ ತಾಲೂಕು ಆಡಳಿತ ಹರ್ಷ ವ್ಯಕ್ತಪಡಿಸಿದೆ.

ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.

ಬೆಳ್ತಂಗಡಿ ಇಲ್ಲಿನ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಚಿನ್ಮಯ್ ಜಿ.ಕೆ. (624) ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಅವರಿಗೆ ವಿಜ್ಞಾನದಲ್ಲಿ 99 ಅಂಕ ಸಿಕ್ಕಿದ್ದು ಉಳಿದ ಎಲ್ಲಾ ವಿಷಯಗಳಲ್ಲಿ ಪೂರ್ಣ ಅಂಕಗಳು ದೊರೆತಿವೆ.

ಬೆಳ್ತಂಗಡಿ ಜೂನಿಯರ್ ಕಾಲೇಜಿನ ಉಪನ್ಯಾಸಕ ಗಣೇಶ ರಾಮಚಂದ್ರ ಭಟ್ ಹಾಗೂ ಸರಕಾರಿ ಹೈಸ್ಕೂಲ್ ಶಿಕ್ಷಕಿ ಮಾಲಿನಿ ಹೆಗಡೆ ಅವರ ಪುತ್ರ‌ ಚಿನ್ಮಯ್.