ಡೈಲಿ ವಾರ್ತೆ: 10/ಮೇ /2024

ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ

ಬಂಟ್ವಾಳ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಲ್ಲಿನ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಶುಕ್ರವಾರ  ಬಸವ ಜಯಂತಿ ಆಚರಣೆ ಆಚರಿಸಲಾಯಿತು.

   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಅರ್ಚನ ಭಟ್ ಮಾತನಾಡಿ , 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ರೂವಾರಿ
ಬಸವಣ್ಣನವರು ತಮ್ಮ ವಚನಗಳಿಂದ ಸಮಾಜ ಸುಧಾರಣೆಯ ಕೆಲಸ ಮಾಡಿದವರು.
ಕಾಯಕವೇ ಕೈಲಾಸ ಎಂದು ಮಾನವ ಕುಲಕ್ಕೆ ಸಂದೇಶವನ್ನು ನೀಡಿದವರು  ವಿಶ್ವಗುರು ಬಸವಣ್ಣನವರು ಎಂದು ಹೇಳಿದರು.

ಈ ಸಂದರ್ಭದಲ್ಲಿ  ಉಪ ತಹಸೀಲ್ದಾರ್ ರಾಜೇಶ್ ನಾಯ್ಕ್ , ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಗ್ರಾಮ ಸಹಾಯಕರು‌ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಬಂಟ್ವಾಳ ಕಂದಾಯ ನಿರೀಕ್ಷಕ ಜೆ. ಜನಾರ್ದನ್ ಸ್ವಾಗತಿಸಿ ವಂದಿಸಿದರು.