ಡೈಲಿ ವಾರ್ತೆ: 18/ಮೇ /2024

ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿ ಬಾಲಕ ಮೃತ್ಯು!

ಮೈಸೂರು: ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು  ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರವಾಗಿ ಹೊಲದಲ್ಲೇ 8 ವರ್ಷದ ಬಾಲಕ ಭವಿಷ್ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಚಾಮರಾಜನಗರಕ್ಕೆ ವಿವಾಹವಾಗಿದ್ದ ತಾಯಿ ಮಮತಾ, ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಈ ವೇಳೆ ಭವಿಷ್‌ ತನ್ನ ಸೋದರಮಾವನ ಜೊತೆ ಟ್ರ‍್ಯಾಕ್ಟರ್ ನಲ್ಲಿ ಜಮೀನಿಗೆ ತೆರಳಿದ್ದ. ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಭವಿಷ್‌ ಟ್ರ‍್ಯಾಕ್ಟರ್ ನಿಂದ ಕೆಳಗೆ ಬಿದ್ದಿದ್ದಾನೆ ಬಳಿಕ ರೊಟಾವೆಲ್ಟರ್‌ಗೆ ಸಿಲುಕಿ ಅವಘಡ ಸಂಭವಿಸಿದೆ.

ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.