ಡೈಲಿ ವಾರ್ತೆ: 28/ಮೇ /2024

ನಗರ ನಾಗೇಶ್ ಮೂರ್ತಿ ಅವರಿಗೆ ನಾಲ್ಮುಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಬೆಂಗಳೂರು  : ಮೇ 27 ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಿನ್ನೆ ಪರಿಪೂರ್ಣ ಪ್ರತಿಷ್ಠಾನ ಫೌಂಡೇಶನ್ ( ರಿ ), ಕರ್ನಾಟಕ ನೇತಾಜಿ ಚಾರಿಟಬಲ್ ಟ್ರಸ್ಟ್  ( ರಿ ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ನಿವೃತ್ತ  ಲೋಕಾಯುಕ್ತ ನ್ಯಾಯಮೂರ್ತಿ ಡಾಕ್ಟರ್ ಸಂತೋಷ್ ಹೆಗಡೆ ನಗರ ನಾಗೇಶ್ ರವರ ಸಮಾಜ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ನಾಲ್ಮುಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ನೀಡಿ ಗೌರವಿಸಿರುತ್ತಾರೆ.

ಈ ಸಂದರ್ಭದಲ್ಲಿ ನೇತಾಜಿ ಚಾರಿಟಬಲ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ರವಿಕುಮಾರ್ ಹಾಗೂ ಪರಿಪೂರ್ಣ ಪ್ರತಿಷ್ಠಾನ ಪೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ರವಿ ಕೋಟಿ ಸೂರ್ಯ ಉಪಸ್ಥಿತರಿದ್ದರು ಇನ್ನೊಬ್ಬ ಮುಖ್ಯ ಅತಿಥಿ ನಟ,ನಿರ್ದೇಶಕ, ಸಾಹಿತಿ, ನಾಗೇಂದ್ರ ಪ್ರಸಾದ್, ಹಾಗೂ ಡಾ. ಪಡುವಳ್ಳಿ ಹರ್ಷೇಂದ್ರ ಕುಮಾರ್ ಸಮಾರಂಭದಲ್ಲಿ ಹಾಜರಿದ್ದರು