ಡೈಲಿ ವಾರ್ತೆ: 29/ಮೇ /2024

ಬಂಟ್ವಾಳ : ವಿಧಾನ ಪರಿಷತ್ತಿನ ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ, ಶಾಸಕರಿಂದ ಕಲ್ಲಡ್ಕದಲ್ಲಿ ಮತ ಯಾಚನೆ

ಬಂಟ್ವಾಳ : ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ  ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ. ಎ ಅಭ್ಯರ್ಥಿ ಎಸ್.ಎಲ್ ಬೋಜೇಗೌಡ ಅವರ ಪರವಾಗಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸಂಸ್ಥೆಯ ಸಂಸ್ಥಾಪಕ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಶಿಕ್ಷಕರುಗಳನ್ನು ಭೇಟಿಯಾಗಿ ಮತಯಾಚಿಸಿದರು.

    ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಪ್ರಮುಖರಾದ ದೇವದಾಸ್ ಶೆಟ್ಟಿ, ದಿನೇಶ್ ಅಮ್ಟೂರು, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು ಉಪಸ್ಥಿತರಿದ್ದರು.