ಡೈಲಿ ವಾರ್ತೆ: 08/ಜೂ./2024

ಬಂಟ್ವಾಳ: ಸ್ಕೂಟರ್ ಗೆ  ಲಾರಿ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಲಾರಿಯೊಂದು ಸ್ಕೂಟರ್  ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಶನಿವಾರ ಸಂಜೆ ವೇಳೆ ನಡೆದಿದೆ.

ಮೃತಪಟ್ಟ ಯುವಕ ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ (47) ಎಂದು ಗುರುತಿಸಲಾಗಿದೆ.

ಇವರು ಸ್ಕೂಟರ್ ನಲ್ಲಿ ಬಿಸಿರೋಡಿನಿಂದ ಮುಡಿಪು ಕಡೆಗೆ ತನ್ನ ವೈಯಕ್ತಿಕ ಕೆಲಸದ ನಿಮಿತ್ತ ಸಂಚರಿಸುವ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿ ಚಾಲಕ ಇವರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಳೆಯಲ್ಪಟ್ಟು ತಲೆಗೆ ಗಂಭೀರವಾದ ಏಟಾಗಿ ರಕ್ತಸ್ರಾವ ಉಂಟಾಗಿತ್ತು. ರಸ್ತೆಯ ಮಧ್ಯ ಭಾಗಕ್ಕೆ ಎಸೆಯಲ್ಪಟ್ಟ ಇವರನ್ನು ಪೊಲೀಸರು ಸ್ಥಳಕ್ಕೆ ಬರುವವರೆಗೂ ಯಾರು ಮುಟ್ಟಿಲ್ಲ, ಸುಮಾರು ಅರ್ಧ ತಾಸಿನವರೆಗೂ ಇವರ ಮೃತದೇಹ ರಸ್ತೆಯ ಮಧ್ಯ ಭಾಗದಲ್ಲಿತ್ತು ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.