ಡೈಲಿ ವಾರ್ತೆ: 12/ಜೂ./2024

ನಟ ವಿನೋದ್ ರಾಜ್‌ಗೆ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು!

ಕನ್ನಡ ಚಿತ್ರರಂಗದ ನಟ ವಿನೋದ್ ರಾಜ್‌ಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದಾರೆ.

11 ವರ್ಷಗಳ ಹಿಂದೆ ವಿನೋದ್ ರಾಜ್ ಹಾರ್ಟ್ ಆಪರೇಷನ್‌ಗೆ  ಒಳಗಾಗಿದ್ದರು. ಈ ವೇಳೆ, ಅವರ ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು. ಈ ಪರಿಣಾಮ, ಇದೀಗ ಅದೇ ಸ್ಟಂಟ್‌ನಿಂದ ಕರುಳಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಇದೀಗ ಆಪರೇಷನ್ ಕೂಡ ಮಾಡಲಾಗಿದ್ದು, ಇನ್ನೇರಡು ದಿನಗಲ್ಲಿ ವಿನೋದ್ ರಾಜ್ ಡಿಸ್ಚಾರ್ಜ್ ಕೂಡ ಆಗಲಿದ್ದಾರೆ.

ಅಂದಹಾಗೆ, ವಿನೋದ್ ರಾಜ್ ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಡ್ಯಾನ್ಸ್ ರಾಜಾ ಡ್ಯಾನ್ಸ್, ಶ್ರೀ ವೆಂಕಟೇಶ್ವರ ಮಹಿಮೆ, ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನನಗು ಹೆಂಡ್ತಿ ಬೇಕು, ಯುದ್ಧ ಪರ್ವ, ನಾಯಕ, ಬನ್ನಿ ಒಂದ್ಸಲಾ ನೋಡಿ, ಗಿಳಿ ಬೇಟೆ ಎಂಬ ಸಿನಿಮಾಗಳಲ್ಲಿ ನಟಿಸಿದ್ದಾರೆ.