ಡೈಲಿ ವಾರ್ತೆ: 13/ಜೂ./2024

ಅಪ್ಪನ ಬಗ್ಗೆ ಆಶ್ಲೀಲವಾಗಿ ನಿಂದಿಸುತ್ತಿರುವ ನಿಮಗೆಲ್ಲರಿಗೆ ಧನ್ಯವಾದ: ದರ್ಶನ್‌ ಪುತ್ರ ವಿನೀಶ್‌ ಭಾವುಕ ಪೋಸ್ಟ್‌!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಅವರ ಪುತ್ರ ವಿನೀಶ್‌  ತಂದೆಯನ್ನು ನೆನೆದು ತಮ್ಮ ಇನ್‌ಸ್ಟಾಗ್ರಾಮ್‌  ಖಾತೆಯಲ್ಲಿ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

ನನ್ನ ಅಪ್ಪನ ಬಗ್ಗೆ ಕೆಟ್ಟ ಹಾಗೂ ಆಶ್ಲೀಲ ಭಾಷೆಯಲ್ಲಿ ಕಮೆಂಟ್‌ ಮಾಡಿ ನಿಂದಿಸುತ್ತಿರುವ ನಿಮಗೆಲ್ಲರಿಗೆ ಧನ್ಯವಾದ. ನಾನು 15 ವರ್ಷದ ಬಾಲಕನಾಗಿರಬಹುದು ಆದರೆ ನನಗೂ ಭಾವನೆಗಳಿವೆ ಎನ್ನುವುದನ್ನು ನೀವೆಲ್ಲ ಪರಿಗಣಿಸಲೇ ಇಲ್ಲ. ಇಂಥ ಕಷ್ಟದ ಸಮಯದಲ್ಲಿ ನನ್ನ ತಂದೆ -ತಾಯಿಗೆ ನಿಮ್ಮೆಲ್ಲರ ಬೆಂಬಲದ ಅಗತ್ಯವಿದೆ. ನೀವು ನನಗೆ ನಿಂದಿಸಿ ಕಮೆಂಟ್‌ ಮಾಡುವುದರಿಂದ ಯಾವುದೇ ಬದಲಾವಣೆ ಆಗಲು ಸಾಧ್ಯವಿಲ್ಲ ದರ್ಶನ್ ಪುತ್ರ ಎಂದು ದುಃಖದಲ್ಲಿ ತನ್ನ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಘಟನೆ ಬಳಿಕ ದರ್ಶನ್‌ ವಿರುದ್ಧ ರಾಜ್ಯದೆಲ್ಲೆಡೆ ಆಕ್ರೋಶ ಭುಗಿಲೆದ್ದಿದೆ. ಚಿತ್ರರಂಗದಿಂದ ಮೇಲೆ ದರ್ಶನ್‌ ಅವರನ್ನು ಬ್ಯಾನ್‌ ಮಾಡಬೇಕೆನ್ನುವ ಒತ್ತಡ ಕೂಡ ಕೇಳಿಬಂದಿದೆ. ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರುವುದಾಗಿ ಫಿಲ್ಮ್‌ ಚೇಂಬರ್‌ ಹೇಳಿದ್ದೂ ನಡೆದಿದೆ.