ಡೈಲಿ ವಾರ್ತೆ: 18/ಜೂ./2024

ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾ ಗೌಡ ಅಸ್ವಸ್ಥ

ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಯಲ್ಲಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಗೆಳತಿ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದಾರೆ.

ಪವಿತ್ರಾ ಗೌಡ ಅಸ್ವಸ್ಥರಾದ ಹಿನ್ನೆಲೆ ಇಂದು ಮಧ್ಯಾಹ್ನ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರನ್ನು ಕರೆಸಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಪವಿತ್ರಾ ಗೌಡ ಅವರನ್ನು ವೈದ್ಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್‌ & ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಯ ಹಿನ್ನೆಲೆಯಲ್ಲಿ ಸದ್ಯ ಇವರು ಪೊಲೀಸ್‌ ಕಸ್ಟಡಿಯಲ್ಲಿದೆ. ಪೊಲೀಸ್ ಕಸ್ಟಡಿ ವೇಳೆ ಸರಿಯಾಗಿ ಊಟ, ತಿಂಡಿ ಸೇವಿಸದೆ ಇರುವುದರಿಂದ ಪವಿತ್ರಾ ಗೌಡ ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗಿದೆ. ಇಂದು ಮಧ್ಯಾಹ್ನ ಕೂಡ ಅವರು ಊಟ ಮಾಡಿರಲಿಲ್ಲ. ಹೀಗಾಗಿ ಸತತ ವಿಚಾರಣೆ ವೇಳೆ ಅಸ್ವಸ್ಥಳಾಗಿ ಕುಸಿದುಬಿದ್ದಿದ್ದಾರೆ. ಕೂಡಲೇ ಪೊಲೀಸರು ಠಾಣೆಗೆ ವೈದ್ಯರನ್ನು ಕರೆಸಿದ್ದಾರೆ. ವೈದ್ಯರು ಬಂದು ಚೆಕ್‌ ಮಾಡಿದಾಗ ಸರಿಯಾಗಿ ಊಟ ಸೇವಿಸದೆ ಅಸ್ವಸ್ಥರಾಗಿರೋದು ಬಯಲಾಗಿದೆ.