ಡೈಲಿ ವಾರ್ತೆ: 21/ಜೂ./2024

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವತಿಯಿಂದಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ: ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆ

ಮಂಗಳೂರು: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ – ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ” ವು ಕ್ಷೇತ್ರ ವ್ಯಾಪ್ತಿಯ ಎಲ್ಲಾ ಬೂತ್ ಮಟ್ಟದಲ್ಲಿ ನಡೆಯಿತು.

ಮುಖ್ಯ ಅಥಿತಿಗಳಾಗಿ ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರಾದ ಅಕ್ಬರ್ ಅಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಮಂಗಳೂರು ಉತ್ತರ ಕ್ಷೇತ್ರ ಅಧ್ಯಕ್ಷರಾದ ಉಸ್ಮಾನ್ ಗುರುಪುರ ಹಾಗೂ ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಫರಾ , ಕಾರ್ಪೋರೇಟರ್ ಶಂಶಾದ್ ಅಬೂಬಕ್ಕರ್ ರವರು ಭಾಗವಹಿಸಿದರು.

ಈ ಕಾರ್ಯಕ್ರಮದಲ್ಲಿ ಅಸೆಂಬ್ಲಿ, ಬ್ಲಾಕ್, ಗ್ರಾಮ , ವಾರ್ಡ್, ಬೂತ್ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಮತ್ತು ಸಾರ್ವಜನಿಕರು ಪಾಲ್ಗೊಂಡು ಸಿಹಿ ತಿಂಡಿ ವಿತರಿಸಿ ಸಂಭ್ರಾಮಾಚರಿಸಿದರು.ಈ ಸಂಧರ್ಭದಲ್ಲಿ ವಿವಿಧ ಕಾರ್ಯಕ್ರಮವನ್ನು ಆಯೋಜಿಸಲಾಯಿತು.