ಡೈಲಿ ವಾರ್ತೆ: 23/ಜೂ./2024

ಪೊಲೀಸ್ ಕಾನ್ಸಟೇಬಲ್ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಕಲಬುರಗಿ: ನಗರ ಹೊರವಲಯದ ಉದನೂರು ರಸ್ತೆಯ ಪಕ್ಕದ ಜಮೀನಿನಲ್ಲಿ ಇರುವ ಬೇವಿನ ಮರಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ನೇಣು ಹಾಕಿಕೊಂಡು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ನೇಣಿಗೆ ಶರಣಾದ ವ್ಯಕ್ತಿ ಚಿತ್ತಾಪುರ ತಾಲ್ಲೂಕಿನ ಮಾಡಬೂಳ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ದೊಡ್ಡೇಶ್ (40) ಎಂದು ಗುರುತಿಸಲಾಗಿದೆ.

ದೊಡ್ಡೇಶ್ ಅವರು ನಗರದ ಹೈಕೋರ್ಟ್ ಕಲಬುರಗಿ ಪೀಠ ಸಮೀಪದ ಬಡಾವಣೆಯಲ್ಲಿ ವಾಸವಾಗಿದ್ದರು.
ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ.

ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ವಿವಿ ಠಾಣೆಯ ಪಿಐ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ ದೇಹವನ್ನು ಜಿಮ್ಸ್ ಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.