ಡೈಲಿ ವಾರ್ತೆ: 26/ಜೂ./2024

ದಕ್ಷಿಣ ಕನ್ನಡ (ಕುತ್ತಾರು): ಮನೆ ಗೋಡೆ ಕುಸಿದು ಒಂದೆ ಕುಟುಂಬದ ನಾಲ್ವರು ಸಾವು

ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ ಮಳೆಗೆ ಮನೆ ಕುಸಿದು ಒಂದೇ ಕುಟುಂದ ನಾಲ್ವರು ಮೃತಪಟ್ಟಿದ್ದಾರೆ.

ಮೃತರನ್ನು ಯಾಸಿರ್ (45), ಅವರ ಪತ್ನಿ ಮರಿಯಮ್ಮ(40) ಹಾಗೂ ಮಕ್ಕಳಾದ ರಿಯಾನ, ರಿಫಾನ ಎಂದು ಗುರುತಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ಸ್ಥಳೀಯರು ಮೂವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.