ಡೈಲಿ ವಾರ್ತೆ: 26/ಜೂ./2024

ಯಡೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಗಂಭೀರ!

ತೀರ್ಥಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಜೂ. 26 ರಂದು ಬುಧವಾರ ಯಡೂರು ಸಮೀಪ ಮತ್ತಿಗೆ ಬಳಿ ನಡೆದಿದೆ.

ತೀರ್ಥಹಳ್ಳಿಯ ಬುಕ್ಲಾಪುರ ಹಾಗೂ ಹೊರಬೈಲಿನ ಐವರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದು. ವಾಪಾಸ್ ಬರುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಾರು ಸಂಪೂರ್ಣ ಜಖಂ ಗೊಂಡಿದೆ. ಕಾರಿನಲ್ಲಿದ್ದ ಐವರಲ್ಲಿ ಗಂಭೀರ ಗಾಯಗೊಂಡ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದ್ದು. ಉಳಿದ ಮೂವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.