ಡೈಲಿ ವಾರ್ತೆ: 27/ಜೂ./2024

ಮಂಗಳೂರು: ವಿದ್ಯುತ್ ತಂತಿ ಬಿದ್ದು ಇಬ್ಬರು ರಿಕ್ಷಾ ಚಾಲಕರು ಸ್ಥಳದಲ್ಲೇ ಮೃತ್ಯು!

ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಗರದ ರೊಸಾರಿಯೋ ಬಳಿ ನಡೆದಿದೆ.

ಮೃತ ರಿಕ್ಷಾ ಚಾಲಕರು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಮತ್ತು ಪುತ್ತೂರು ರಾಜು ಎಂದು ಗುರುತಿಸಲಾಗಿದೆ. ಇಬ್ಬರು ಪಾಂಡೇಶ್ವರ ರೋಸಾರಿಯೋ ಶಾಲೆಯ ಹಿಂಭಾಗದಲ್ಲಿ ಬಾಡಿಗೆ ರೂಮಿನಲ್ಲಿ ವಾಸವಾಗಿದ್ದರು.

ಬೆಳಿಗ್ಗೆ 4:30 ರ ಸುಮಾರಿಗೆ ರಿಕ್ಷಾ ಚಾಲಕರೊಬ್ಬರು ಆಟೋ ತೊಳಿಯುತ್ತಿರುವ ಸಮಯದಲ್ಲಿ ವಿದ್ಯುತ್ ತಂತಿಯೊಂದು ತುಂಡಾಗಿ ಅವರ ಮೇಲೆ ಬಿದ್ದಿದೆ. ತಕ್ಷಣ ಅವರಿಗೆ ವಿದ್ಯುತ್ ಶಾಕ್ ತಗುಲಿದ್ದು ಅದನ್ನು ಕಂಡು ಮತ್ತೊಬ್ಬ ರಿಕ್ಷಾ ಚಾಲಕರು ಪ್ರಾಣ ಉಳಿಸಲು ಹೋಗಿ ತಮ್ಮ ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮೃತ ದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.