ಡೈಲಿ ವಾರ್ತೆ: 29/ಜೂ./2024

ಶಿಕಾರಿಪುರ: ಆಂಬುಲೆನ್ಸ್‌-ಬೈಕ್ ನಡುವೆ ಭೀಕರ ಅಪಘಾತ – ಮೂವರು ಬೈಕ್ ಸವಾರರು ಮೃತ್ಯು!

ಶಿವಮೊಗ್ಗ: ಆಂಬುಲೆನ್ಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಬೈಕ್‌ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ.

ಮೃತರನ್ನು ಪ್ರಸನ್ನ (25), ಕಾರ್ತಿಕ್ (27) ಮತ್ತು ಅಜಯ್ (25) ಎಂದು ಗುರುತಿಸಲಾಗಿದೆ. ಮೃತರು ಹೊಸ ಜೋಗದ ನಿವಾಸಿಗಳು ಎಂದು ವರದಿಯಾಗಿದೆ.

ಆಂಬುಲೆನ್ಸ್ ಶಿವಮೊಗ್ಗದಿಂದ ಹಾವೇರಿಗೆ ತೆರಳುತ್ತಿತ್ತು. ಬೈಕ್ ಶಿಕಾರಿಪುರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.