ಡೈಲಿ ವಾರ್ತೆ: 02/ಜುಲೈ /2024

ಶಿವಮೊಗ್ಗ: ಚೋರ್ ಬಜಾರ್ ನಲ್ಲಿ ಅಗ್ನಿ ಅವಘಡ – 8ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!

ಶಿವಮೊಗ್ಗ: ಇಲ್ಲಿನ ಗಾಂಧಿಬಜಾರ್‌ ಬಸವೇಶ್ವರ ದೇವಸ್ಥಾನದ ಬಟ್ಟೆ ಮಾರುಕಟ್ಟೆಯಲ್ಲಿ ತಡರಾತ್ರಿ ಎಂಟಕ್ಕೂ ಅಧಿಕ ಅಂಗಡಿಗಳು ಬೆಂಕಿ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಘಟನೆ ನಡೆದಿದೆ. ತಕ್ಷಣ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟಿತು.

ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಬೆಂಕಿ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಗಿತ್ತು.ಅಂಗಡಿಗಳು ಒತ್ತೊತ್ತಾಗಿ ಇರುವುದರಿಂದ ಹಾನಿಯ ಪ್ರಮಾಣ ಜಾಸ್ತಿ ಆಗಿದೆ.

ತಕ್ಷಣ ಅಕ್ಕಪಕ್ಕದ ಅಂಗಡಿ ಮಾಲೀಕರಿಗೆ ಕರೆ ಮಾಡಿ ಅಂಗಡಿಗಳನ್ನು ಖಾಲಿ ಮಾಡಲು ತಿಳಿಸಲಾಯಿತು. ಅನೇಕ ಅಂಗಡಿ ಮಾಲೀಕರು ಬಟ್ಟೆ, ಚಪ್ಪಲಿ, ಫ್ಯಾನ್ಸಿ ಸಾಮಾನುಗಳನ್ನು ಹೊರಹಾಕಲು ಪ್ರಯತ್ನಿಸಿದರು.

ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ ಆದರೆ ಬೆಂಕಿ ಅವಗಡಕ್ಕೆ ನೈಜ ಕಾರಣ ಹಾಗೂ ಹಾನಿಯ ಪ್ರಮಾಣ ಅಂದಾಜು ಮಾಡಬೇಕಿದೆ ಎಂದು ಶಿವಮೊಗ್ಗ ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ.
.