ಡೈಲಿ ವಾರ್ತೆ: 02/ಜುಲೈ /2024

ಕೋರ್ಟ್ ಆವರಣದಲ್ಲಿ ವ್ಯಕ್ತಿ ಮೇಲೆ ತಲ್ವಾರ್​ನಿಂದ ದಾಳಿ!

ಕಲಬುರಗಿ: ಇತ್ತೀಚಿಗೆ ಕಲಬುರಗಿಯಲ್ಲಿ ಓರ್ವ ವಕೀಲನನ್ನು ದುಷ್ಕರ್ಮಿಗಳು ಹಾಡಹಗಲೆ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಕಲಬುರಗಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಓರ್ವ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಮೂವರು ಹಲ್ಲೆ ಮಾಡಿದ್ದಾರೆ.

ಸಿನಿಮೀಯ ಶೈಲಿಯಲ್ಲಿ ಬೆನ್ನತ್ತಿ ಬಂದು ಕಲಬುರಗಿ ಜಿಲ್ಲಾ ಕೋರ್ಟ್ ಆವರಣದಲ್ಲೇ ವ್ಯಕ್ತಿಯ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಧೀರಜ್ ಎಂದು ಗುರುತಿಸಲಾಗಿದೆ.
ಹಲ್ಲೆ ಮಾಡಿದ ಆರೋಪಿಗಳು ಪ್ರಶಾಂತ್ ಪಾಟೀಲ್ (20), ವೀರೇಶ್ ಪಾಟೀಲ್ (19), ರಾಮು ಪಾಟೀಲ್ (38) ಎಂದು ತಿಳಿದು ಬಂದಿದೆ.
ಆರೋಪಿಗಳ ತಲ್ವಾರ್ ದಾಳಿಯಿಂದ ಧೀರಜ್‌ಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆ ಮಾಡುತ್ತಿದ್ದ ವೇಳೆ ಕೋರ್ಟ್​​ ಆವರಣದಲ್ಲಿದ್ದ ಸಾರ್ವಜನಿಕರು ಮತ್ತು ವಕೀಲರು ಆರೋಪಿಗಳನ್ನು ತಡೆದಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ವಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.