ಡೈಲಿ ವಾರ್ತೆ: 05/ಜುಲೈ /2024

ಬಂಟ್ವಾಳ: ಸೇತುವೆ ಸಮೀಪ ಆಟೋ ರಿಕ್ಷಾ ನಿಲ್ಲಿಸಿ ಚಾಲಕ ನಾಪತ್ತೆ!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಆಟೋ ರಿಕ್ಷಾ ನಿಲ್ಲಿಸಿ ಆಟೋ ಚಾಲಕ ನಾಪತ್ತೆ ಯಾದ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಆಟೋ ಚಾಲಕ ಕುಕ್ಕಿಪಾಡಿ ಗ್ರಾಮದ ಗಿರೀಶ್ (35) ಎಂದು ತಿಳಿದು ಬಂದಿದೆ. ಇವರು
ಕೋಟಿಯ ದರ್ಶನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬಾಡಿಗೆ ಹೋಗಲು ಇದೆ ಎಂದು ಹೇಳಿ ಮನೆಯಿಂದ ತೆರಳಿದ್ದು, ಬುಧವಾರ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಪೊಳಲಿ ಗುರುಪುರ ಸೇತುವೆ ಮೇಲೆ ರಿಕ್ಷಾ ಒಂದು ಅಡ್ಡವಾಗಿ ನಿಂತಿದ್ದನ್ನು ಗಮನಿಸಿ ಪರಿಶೀಲನೆ ನಡೆಸಿದಾಗ ರಿಕ್ಷಾದಲ್ಲಿ ಯಾರೂ ಇಲ್ಲದೇ ಇರುವುದರಿಂದ ರಿಕ್ಷಾವನ್ನು ಪರಿಶೀಲಿಸಿದ ಪೊಲೀಸರು ಗಿರೀಶ ಅವರ ಮನೆಗೆ ಮಾಹಿತಿ ತಿಳಿಸಿದ್ದಾರೆ.

ಅಡ್ಡೂರು-ಪೊಳಲಿ ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ವಾಮದಪದವು ಸಮೀಪದ ಕುಕ್ಕಿಪಾಡಿ ಬಾಬು ಪೂಜಾರಿಯವರ ಪುತ್ರ ಗಿರೀಶ್ ಏಣ್ಮೂರು ಶ್ರೀ ನಾಗಬ್ರಹ್ಮ ದೈವಸ್ಥಾನದ ಬೈದರ್ಕಳ ಗರಡಿಯಲ್ಲಿ ಕೋಟಿಯ ದರ್ಶನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳಿದ್ದಾರೆ.

ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಾಕದಳದವರು ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.