ಡೈಲಿ ವಾರ್ತೆ: 06/ಜುಲೈ /2024

ಎಲ್‌ಕೆ ಅಡ್ವಾಣಿ ಬದುಕಿರುವಾಗಲೇ ಶ್ರದ್ಧಾಂಜಲಿ ಸಲ್ಲಿಸಿದ ಕೇಂದ್ರ ಸಚಿವ ವಿ. ಸೋಮಣ್ಣ

ತುಮಕೂರು: ಬದುಕಿರುವ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಅರ್ಪಿಸಿದ ಯಡವಟ್ಟು ಘಟನೆ ಶನಿವಾರ ಗುಬ್ಬಿ ಪಟ್ಟಣದಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಹೊರವಲಯದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕಾರ್ಯಕರ್ತರ ಸಭೆಯಲ್ಲಿ ಸೋಮಣ್ಣ ಈ ಯಡವಟ್ಟು ಮಾಡಿಕೊಂಡಿದ್ದಾರೆ. ಸಮಾರಂಭದಲ್ಲಿ ಮುಖ್ಯ ಸೋಮಣ್ಣ ಅತಿಥಿಯಾಗಿ ಭಾಗವಹಿಸಿದ್ದರು.

ವಯೋ ಸಹಜ ಅನಾರೋಗ್ಯದಲ್ಲಿರುವ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿಯವರನ್ನು ನಿಧನರಾಗಿದ್ದಾರೆಂದು ತಿಳಿಸಿದ ಕೇಂದ್ರ ಸಚಿವ ಸೋಮಣ್ಣ ಶ್ರದ್ಧಾಂಜಲಿಯನ್ನೂ ಅರ್ಪಿಸಿದ್ದಾರೆ.

ಮಾಜಿ ಉಪ ಪ್ರಧಾನಿ ಅಡ್ವಾಣಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ವಿ.ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿಯೇ ಬದುಕಿರುವ ಅಡ್ವಾಣಿಯವರನ್ನು ನಿಧನರಾಗಿದ್ದಾರೆಂದು ತಿಳಿಸಿದ್ದಾರೆ. ಆ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.