ಡೈಲಿ ವಾರ್ತೆ: 09/ಜುಲೈ /2024

ರಾಹುಲ್‌ಗೆ ಕೆನ್ನೆಗೆ ಯಾರಾದ್ರೂ ಹೊಡಿಬೇಕು..ಶಾಸಕ ಭರತ್ ಶೆಟ್ಟಿ ವಿವಾದಾತ್ಮಕ ಹೇಳಿಕೆಗೆ ಖಂಡನೆ: ಉಡುಪಿ ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್

ಕೋಟ: ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಡಿ ಯಲ್ಲಿ ಹಾಗೂ ಸಂವಿಧಾನದ ಬಗ್ಗೆ ಅಪಾರ ಗೌರವದಿಂದ ಮಾತನಾಡಿದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಏಕವಚನ ದಲ್ಲಿ ಮಾತನಾಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿಯ ಹೇಳಿಕೆ ಖಂಡನಿಯ ಎಂದು ಉಡುಪಿ ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಖಂಡಿಸಿದ್ದಾರೆ.

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಮಂಗಳೂರಿನಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಘಟಕ ಪ್ರತಿಭಟನೆಯಲ್ಲಿ ಶ್ವಾನವನ್ನು ತೋರಿಸಿ ರಾಹುಲ್‌ ಗಾಂಧಿಗೆ ಹೋಲಿಸಿ ಲೇವಡಿ ಮಾಡಿ ರಾಹುಲ್ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಕೆನ್ನೆಗೆ ಬಾರಿಸಬೇಕು ಎಂದು ಶಾಸಕ ಭರತ್ ಶೆಟ್ಟಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆ ಶಾಸಕ ಭರತ್ ಶೆಟ್ಟಿ ಅವರ ಅವಿವೇಕತನ ತೋರಿಸುತ್ತ ಇದೆ. ರಾಹುಲ್ ಗಾಂಧಿ ಅವರು ಸಂಸತ್ ನಲ್ಲಿ ಹಿಂದೂ ಧರ್ಮದ ವಿರುದ್ದ ಯಾವುದೇ ಹೇಳಿಕೆ ನೀಡಿಲ್ಲ, ಆದರೆ ಹಿಂದೂ ಧರ್ಮದಲ್ಲಿ ಹಿಂಸಾಚಾರಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ ‘ಆದರೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ಏಕವಚನ ದಲ್ಲಿ ಬಾಯಿಗೆ ಬಂದ ಹಾಗೆ ಮಾತನಾಡಿ ಭರತ್ ಶೆಟ್ಟಿ ಕಲಿತ ಸಂಸ್ಕೃತಿ ಸಂಸ್ಕಾರ ದಲ್ಲಿ ಮಾತನಾಡುತ್ತ ಇದ್ದಾರೆ. ನಾವು ಇದನ್ನು ಖಂಡಿಸುತ್ತೇವೆ.

ನಮ್ಮ ನಾಯಕ ರಾಹುಲ್ ಗಾಂಧಿ ಅವರು ನಮ್ಮ ಭಾರತ ದೇಶದ ಮಹಾನ್ ನಾಯಕ. ಭಾರತ ದೇಶಕೊಸ್ಕರ ಪ್ರಾಣ ಕೊಟ್ಟ ಮನೆತನ ದಿಂದ ಬಂದವರು. ಅವರ ಬಗ್ಗೆ ಮಾತನಾಡುವಾಗ ನಾಲಿಗೆಗೆ ಹಿಡಿತ ಇರಲಿ ಎಂದು ಭರತ್ ಶೆಟ್ಟಿ ಅವರಿಗೆ ಎಚ್ಚರಿಸುತ್ತ ಇದ್ದೇನೆ ಎಂದು ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.