ಡೈಲಿ ವಾರ್ತೆ: 09/ಜುಲೈ /2024

ಫೊಟೋಗ್ರಾಫರ್ ಅಸೋಸಿಯೇಶನ್‌ನಿಂದ ಇ-ಶೃಮ್ ಕಾರ್ಡ್ ನೋಂದಣಿ

ಸೌತ್ ಕೆನರಾ ಫೊಟೋಗ್ರಾರ‍್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ , ಉಡುಪಿ ಜಿಲ್ಲೆ , ಕುಂದಾಪುರ-ಬೈಂದೂರು ವಲಯ ಹಾಗೂ ಕಾರ್ಮಿಕ ಇಲಾಖೆ ಉಡುಪಿ ಉಪವಿಭಾಗ ಇವರ ವತಿಯಿಂದ ಮಾಹಿತಿ ಕಾರ್ಯಕಾರ ಮತ್ತು ಇ-ಶ್ರಮ್ ನೋಂದಣಿ ಕಾರ್ಯಕ್ರಮ ಮಂಗಳವಾರ ಕುಂದಾಪುರ ಹರಿಪ್ರಸಾದ್ ಹೋಟೆಲ್ ಇಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಕಾರ್ಮಿಕ ಇಲಾಖೆ ಉಡುಪಿ ಉಪವಿಭಾಗ ಉಡುಪಿ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್. ಉದ್ಘಾಟಿಸಿ ಮಾತನಾಡಿ ಪೋಟೋಗ್ರಾಫರ್ ಅಸೋಸಿಯೇಷನ್ ಸದಸ್ಯರುಗಳಿಗಾಗಿ ಹಮ್ಮಿಕೊಂಡ ಕಾರ್ಯಕ್ರಮ ಉತ್ತಮ ಕಾರ್ಯಕ್ರಮ, ಅಸಂಗಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಫೋಟೋಗ್ರಾರ‍್ಸ್ ನೋಂದಾವಣೆ ಮಾಡಿಕೊಳ್ಳುವ ಮೂಲಕ ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ಕುಂದಾಪುರ ಪುರಸಭೆ ಮುಖ್ಯ ಅಧಿಕಾರಿ ಎಂ. ಮಂಜುನಾಥ , ಕುಂದಾಪುರ ವೃತ್ತ ಕಾರ್ಮಿಕ ನಿರೀಕ್ಷಕ ವಿಜಯೇಂದ್ರ ಕೆ., ಸೌತ್ ಕೆನರಾ ಫೊಟೋಗ್ರಾರ‍್ಸ್ ಅಸೋಸಿಯೇಶನ್ ಕುಂದಾಪುರ, ಬೈಂದೂರು ವಲಯ ಅಧ್ಯಕ್ಷ ದಿವಾಕರ ಶೆಟ್ಟಿ, ಛಾಯಾಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ ಕುಂದಾಪುರ ಇದರ ಅಧ್ಯಕ್ಷ ಗಿರೀಶ್ ಜಿ.ಕೆ., ಸೌತ್ ಕೆನರಾ ಫೊಟೋಗ್ರಾರ‍್ಸ್ ಅಸೋಸಿಯೇಶನ್ ಕುಂದಾಪುರ-ಬೈಂದೂರು ವಲಯದ ಗೌರವಾಧ್ಯಕ್ಷ ಶ್ರೀಧರ ಹೆಗ್ಡೆ, ಸೌತ್ ಕೆನರಾ ಫೊಟೋಗ್ರಾರ‍್ಸ್ ಅಸೋಸಿಯೇಶನ್ ಕುಂದಾಪುರ-ಬೈಂದೂರು ವಲಯದ ಸಲಹಾ ಸಮಿತಿ ಅಧ್ಯಕ್ಷ ದಿನೇಶ್ ಗೋಡೆ , ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಗಣೇಶ್ ಬೆನಕ , ಸೌತ್ ಕೆನರಾ ಫೊಟೋಗ್ರಾರ‍್ಸ್ ಅಸೋಸಿಯೇಶನ್ ಕುಂದಾಪುರ-ಬೈಂದೂರು ವಲಯದ ಉಪಾಧ್ಯಕ್ಷ ಸುರೇಶ್ ಮೊಳಹಳ್ಳಿ , ಸೌತ್ ಕೆನರಾ ಫೊಟೋಗ್ರಾರ‍್ಸ್ ಅಸೋಸಿಯೇಶನ್ ಕುಂದಾಪುರ-ಬೈಂದೂರು ವಲಯದ ನಿಕಟಪೂರ್ವ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ,
ಸೌತ್ ಕೆನರಾ ಫೊಟೋಗ್ರಾರ‍್ಸ್ ಅಸೋಸಿಯೇಶನ್ ಕುಂದಾಪುರ-ಬೈಂದೂರು ವಲಯದ ಪ್ರಧಾನ ಕಾರ್ಯದರ್ಶಿ ದಿನೇಶ್ ರಾಯಪ್ಪನ ಉಪಸ್ಥಿತರಿದ್ದರು.
ಪ್ರಮೋಧಚಂದನ್ ಕಾರ್ಯಕ್ರಮ ನಿರೂಪಿಸಿ, ಶ್ರೀನಿವಾಸ ಶೇಟ್ ಪ್ರಾರ್ಥನೆ ಮಾಡಿ ಸೌತ್ ಕೆನರಾ ಫೊಟೋಗ್ರಾರ‍್ಸ್ ಅಸೋಸಿಯೇಶನ್ ಕುಂದಾಪುರ-ಬೈಂದೂರು ವಲಯದ ಕೋಶಾಧಿಕಾರಿ ಹರೀಶ್ ಪೂಜಾರಿ ಹಂಗಳೂರು ಧನ್ಯವಾದ ಮಾಡಿದರು.