ಡೈಲಿ ವಾರ್ತೆ: 13/ಜುಲೈ /2024

ಮೇಕೆ ಮೇಯಿಸಲು ಹೋಗಿದ್ದ ದಂಪತಿಗಳಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಮೃತ್ಯು

ದೊಡ್ಡಬಳ್ಳಾಪುರ: ರೈಲ್ವೆ ಹಳಿ ಮೇಲೆ ಮೇಕೆಗಳನ್ನು ಮೇಯಿಸುತ್ತಿದ್ದ ದಂಪತಿ ರೈಲಿಗೆ ಸಿಕ್ಕಿಹಾಕಿಕೊಂಡು ಪ್ರಾಣ ಕಳಕೊಂಡ ದುರಂತ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕೆಳಗಿನ ನಾಯಕರಂಡಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಚಂದ್ರ ನಾಯಕ್ ಮತ್ತು ಜಯಬಾಯಿ ಮೃತ ದಂಪತಿಗಳು. ಮೇಕೆ ಮೇಯಿಸಲು ಹೋಗಿದ್ದ ವೇಳೆ ಗಂಡ ರೈಲ್ವೆ ಹಳಿ ಮೇಲೆ ಹೋಗಿದ್ದರು. ಈ ವೇಳೆ ರೈಲು ಬರುತ್ತಿದ್ದುದನ್ನು ಕಂಡು ಕಂಡು ಪತ್ನಿ ಗಂಡನ ರಕ್ಷಣೆಗೆ ಧಾವಿಸಿದ್ದರು. ವೇಗವಾಗಿ ಬಂದ ರೈಲು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೇಲಕ್ಕೆ ಹಾರಿ ಕೆಳಕ್ಕೆ ಬಿದ್ದ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.