ಡೈಲಿ ವಾರ್ತೆ: 13/ಜುಲೈ /2024

ಚಾಲಕನ ನಿಯಂತ್ರಣ ತಪ್ಪಿ ಕಾರು ಬೇವಿನ ಮರಕ್ಕೆ ಡಿಕ್ಕಿ – ನಾಲ್ವರು ಸಾವು!

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾಂವಿ ಬಳಿ ಶನಿವಾರ ಬೆಳಗ್ಗೆ ನಡೆದಿದೆ.

ಮೃತರು ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ ನಿವಾಸಿಗಳಾದ ನೀಲಪ್ಪ ಮೂಲಿಮನಿ(23), ಸುದೀಪ್ ಕೋಟಿ(18) ಸ್ಥಳದಲ್ಲೇ ಮೃತಪಟ್ಟಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶಿವನಗೌಡ ಯಲ್ಲನಗೌಡ್ರ(20), ಕಲ್ಮೇಶ ಮಾನೋಜಿ (26) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಿಗ್ಗೆ ಏಳು ಮಂದಿ ಯುವಕರ ತಂಡ ಸ್ವಿಫ್ಟ್​ ಕಾರಿನಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕು ನಂದಗಡಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಬೇರೆ ವಾಹನ ಓವರ್​​ಟೇಕ್ ಮಾಡಲು ಹೋಗಿ ಅಪಘಾತ ಶಂಕೆ ವ್ಯಕ್ತವಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.