ಡೈಲಿ ವಾರ್ತೆ: 15/ಜುಲೈ /2024

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಮೃತ್ಯು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗದ ತಳಕು ಹೈವೆ ಬ್ರೀಡ್ಜ್ ಸಮೀಪದಲ್ಲಿ ಸಂಭವಿಸಿದೆ.

ಮೃತರು ಬಳ್ಳಾರಿ ಮೂಲದ ಗೋಪಿನಾಥ್ (52), ಲಲಿತಮ್ಮ (47) ಮೃತ ದುರ್ದೈವಿಗಳು. ಬೆಂಗಳೂರಿನಲ್ಲಿ ಉಪನಯನ ಕಾರ್ಯಕ್ರಮ ಮುಗಿಸಿ, ಬಳ್ಳಾರಿಗೆ ತೆರಳುವ ವೇಳೆ ಅಪಘಾತ ನಡೆದಿದೆ. ನಿದ್ರೆಯ ಮಂಪರಿನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಶ್ರೇಯ, ಶ್ರೀನಿವಾಸ್ ಹಾಗೂ ಚಾಲಕ ಸುರೇಶ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ರವಾನಿಸಲಾಗಿದೆ. ಸ್ಥಳಕ್ಕೆ ತಳಕು ಪಿಎಸ್ಐ ಲೋಕೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.